Slide
Slide
Slide
previous arrow
next arrow

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ದೇಶಪಾಂಡೆ

300x250 AD

ಜೊಯಿಡಾ: ತಾಲೂಕಿನ ರಾಮನಗರ, ಜಗಲಬೇಟಗಳಲ್ಲಿ ನೂತನ ಪಶು ಆಸ್ಪತ್ರೆ, ಲೋಕೋಪಯೋಗಿ ಇಲಾಕೆಯ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತೇನೆ, ಹೊಸದಾಗಿ ರಾಮನಗರದಲ್ಲಿ ಪಶು ಆಸ್ಪತ್ರೆಯನ್ನು ನಿರ್ಮಿಸಲಾಗಿದೆ, ಜೋಯಿಡಾ ತಾಲೂಕಿನ ಕೆಲ ಆಸ್ಪತ್ರೆಗಳಿಗೆ ವೈದ್ಯರ ಕೊರತೆ ಇದೆ. ಈ ಬಗ್ಗೆ ಸರ್ಕಾರ ಗಮನಿಸಬೇಕು, ತಾಲೂಕಿನಲ್ಲಿ ನನ್ನ ಅವಧಿಯಲ್ಲಿ ಸಾಕಷ್ಟು ರಸ್ತೆ ಕೆಲಸಗಳನ್ನು ಮಾಡಿಕೊಟ್ಟಿದ್ದೇನೆ. ಇನ್ನೂ ಯಾವುದಾದರೂ ರಸ್ತೆ ಕೆಲಸ ಆಗಬೇಕಾದಲ್ಲಿ ನನಗೆ ತಿಳಿಸಿ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದ ದಬ್ಗಾರ, ಮಾಜಿ ಜಿ.ಪಂ ಸದಸ್ಯ ಸಂಜಯ ಹಣಬರ, ಕೃಷ್ಣ ದೇಸಾಯಿ, ಗುರುನಾಥ ಕಾಮತ್, ಜಗಲಬೇಟ ಗ್ರಾಮ ಪಂಚಾಯತಿ ಅಧ್ಯಕ್ಷ ಗಿರೀಶ್ ನಾಯ್ಕ, ಪಪ್ಪು ಖಲೀಫಾ, ಲೋಕೋಪಯೋಗಿ ಇಲಾಖೆ ಎಇಇ ವಿಜಯಕುಮಾರ್ ಇತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top