ಬೆಂಗಳೂರು: ಗ್ರಾಮೀಣ ಪ್ರದೇಶದ 28 ಸಾವಿರ ಕೆರೆಗಳ ಅಭಿವೃದ್ಧಿಯನ್ನು ಆಯಾ ಗ್ರಾಮ ಪಂಚಾಯತ್ಗಳಿಂದಲೇ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಈ ಹಿಂದೆ ಜಿಲ್ಲಾ ಪಂಚಾಯತ್ಗಳು ಕೆರೆಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸುತ್ತಿತ್ತು. ಆದರೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ಗಳೇ ಕೆರೆಗಳ ಅಭಿವೃದ್ಧಿ ಮಾಡಲಿದೆ. ಈ ಕೆಲಸಕ್ಕೆ ಗುರಿ ನಿಗದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಕೆರೆ, ಕಲ್ಯಾಣಿಗಳ ಅಭಿವೃದ್ಧಿ, ಬದು ನಿರ್ಮಾಣ ಕಾರ್ಯಗಳನ್ನು ಸಹ ಕೈಗೊಳ್ಳಲಾಗಿದೆ. 5 ಎಕರೆ ಒಳಗಿನ ಜಮೀನಿನಲ್ಲಿ ಕೆರೆಗಳ ಅಭಿವೃದ್ಧಿ ಮಾಡುವುದರಿಂದ ತೋಟಗಾರಿಕೆಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಹಾಗೆಯೇ, ಮನೆ ಮನೆಗೆ ಗಂಗೆ ಯೋಜನೆಯ ಕೆಲಸಗಳು ಭರದಿಂದ ಸಾಗುತ್ತಿವೆ ಎಂದು ಅವರು ಹೇಳಿದ್ದಾರೆ.