Slide
Slide
Slide
previous arrow
next arrow

ಗೋಕರ್ಣ ಆತ್ಮಲಿಂಗ ದರ್ಶನ ಪಡೆದ ನಟ ರಿಷಬ್ ಶೆಟ್ಟಿ

300x250 AD

ಗೋಕರ್ಣ: ಇತಿಹಾಸ ಪ್ರಸಿದ್ದ ಗೋಕರ್ಣದ ಮಹಾಬಲೇಶ್ವರ ಮಂದಿರಕ್ಕೆ ಖ್ಯಾತ ಚಿತ್ರ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಆಗಮಿಸಿ ಆತ್ಮಲಿಂಗದ ದರ್ಶನ ಪಡೆದು, ಪ್ರಧಾನ ಅರ್ಚಕರಾದ ವೇ. ರಾಜಗೋಪಾಲ್ ಅಡಿ ಇವರ ನೇತೃತ್ವದಲ್ಲಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಮಹಾಗಣಪತಿ ಮಂದಿರದಲ್ಲಿ ಪೂಜೆ ಸಲ್ಲಿಸಿ, ತಾಮ್ರಗೌರಿ, ಸ್ಮಶಾನಕಾಳಿ ದೇವಾಲಯಕ್ಕೆ ತೆರಳಿ ದೇವಿ ದರುಶನ ಪಡೆದರು.ತದನಂತರ ಕೋಟಿತೀರ್ಥದಲ್ಲಿರುವ ದುರ್ಗಾಲಯದಲ್ಲಿ ಪಿತೃ ಕಾರ್ಯ ಮತ್ತು ದೇವತಾ ಕಾರ್ಯಗಳಲ್ಲಿ ಭಾಗಿಯಾದರು.
ಆಪ್ತ ಗೆಳೆಯ ರಕ್ಷಿತ್ ಶೆಟ್ಟಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಸಲುವಾಗಿಯೂ ವಿಶೇಷ ಪ್ರಾರ್ಥನೆ ಮಾಡಲು ಹೇಳಿದ್ದೂ ಎಲ್ಲರ ಗಮನ ಸೆಳೆಯಿತು. ಈ ವೇಳೆ ಮಂದಿರದ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು, ರಿಷಬ್‌ರವರ ಪತ್ನಿ ಪ್ರಗತಿ, ಮಕ್ಕಳಾದ ರನ್ವಿತ್, ರಾಧ್ಯಾ ಮತ್ತಿತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top