Slide
Slide
Slide
previous arrow
next arrow

ಶ್ರೀನಿಕೇತನ ಶಾಲೆಯಲ್ಲಿ ಸರಸ್ವತಿ ಹವನ: ಅಕ್ಷರಾಭ್ಯಾಸ

300x250 AD

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯಲ್ಲಿ 25 ಜೂನ್, ಮಂಗಳವಾರದಂದು ಸರಸ್ವತಿ ಹವನವನ್ನು ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಶ್ರೀ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು.

ಶ್ರೀ ರಾಜರಾಜೇಶ್ವರಿ ಸಂಸ್ಥೆಯ ಕಾರ್ಯದರ್ಶಿ ಶಿವರಾಮ್ ಭಟ್, ಶಾಲೆಯ ಅಧ್ಯಕ್ಷರಾದ ಮೇಜರ್ ರಘುನಂದನ ಹೆಗಡೆ, ಕಾರ್ಯದರ್ಶಿಗಳಾದ ಪ್ರೊ. ಕೆ. ಎನ್. ಹೊಸಮನಿ, ಎಮ್.ಜಿ.ಹೆಗಡೆ, ಆರ್.ಎಸ್. ಹೆಗಡೆ ಹಾಗೂ ಇತರ ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಎಲ್.ಕೆ.ಜಿ ಓದುತ್ತಿರುವ ಮಕ್ಕಳಿಗೆ ಅವರ ಪಾಲಕರು ಅಕ್ಷರಾಭ್ಯಾಸ ಮಾಡಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ನೂತನ ಮಂತ್ರಿಮಂಡಲದ ಸದಸ್ಯರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಮತ್ತು ಶಿಕ್ಷಕಿ ಶ್ರೀಮತಿ ವಿದ್ಯಾ ಬಾಡ್ಕರ್ ಕಾರ್ಯಕ್ರಮವನ್ನು ನಿರೂಪಿಸಿದರು.

300x250 AD
Share This
300x250 AD
300x250 AD
300x250 AD
Back to top