Slide
Slide
Slide
previous arrow
next arrow

ಹಳಿಯಾಳ, ಮುಂಡಗೋಡು ಹೊರತುಪಡಿಸಿ ಉಳಿದೆಡೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

300x250 AD

ಕಾರವಾರ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ 10 ತಾಲೂಕುಗಳಿಗೆ ಜು.15ಕ್ಕೆ ರಜೆ ನೀಡಲಾಗಿದೆ.

ಹಳಿಯಾಳ, ಮುಂಡಗೋಡು ತಾಲೂಕು ಹೊರತು ಪಡಿಸಿ ಇನ್ನುಳಿದ ಎಲ್ಲಾ ತಾಲೂಕಿಗೆ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲೆಯ 10 ತಾಲೂಕು ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಶಿರಸಿ ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ(12ನೇಯ ತರಗತಿಯ ವರೆಗೂ) ಜು.15, ಸೋಮವಾರದಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top