Slide
Slide
Slide
previous arrow
next arrow

ಭಾಸ್ಕೇರಿ ಬಳಿ ಗುಡ್ಡಕುಸಿತ: ತೆರವು

300x250 AD

ಹೊನ್ನಾವರ: ತಾಲೂಕಿನ ಭಾಸ್ಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 69ರ ಪಕ್ಕದ  ಗುಡ್ಡಕುಸಿತವಾಗಿ ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಕೆಲಕಾಲ ಸ್ಥಗಿತಗೊಂಡ ಘಟನೆ ಮಂಗಳವಾರ ನಡೆದಿದೆ. ಕಳೆದ ವಾರ ಇದೇ ಸ್ಥಳದಲ್ಲಿ ಗುಡ್ಡ ಕುಸಿತ ಉಂಟಾಗಿ ಬಂಡೆಗಲ್ಲು ಉರುಳಿ ಬಿದ್ದಿತ್ತು. ಸೋಮವಾರ ತಡರಾತ್ರಿ ಎಡಬಿಡದೇ ಸುರಿದ ಮಳೆಗೆ ಬೃಹತ್ ಗಾತ್ರದ ಬಂಡೆಗಲ್ಲು ಬಿದ್ದು ವಾಹನ ಸಂಚಾರ ಸ್ಥಗಿತಗೊಳಿಸುವಂತಾಗಿತ್ತು. ತಾಲೂಕಾಡಳಿತ ಅಧಿಕಾರಿಗಳು,ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅವಲೋಕಿಸಿದರು.ರಸ್ತೆ ಸಂಚಾರ ಸುಗಮಗೊಳಿಸಲು ಹರಸಾಹಸಪಟ್ಟರು.

300x250 AD
Share This
300x250 AD
300x250 AD
300x250 AD
Back to top