Slide
Slide
Slide
previous arrow
next arrow

ಶ್ರೀನಿಕೇತನ ವಿದ್ಯಾರ್ಥಿನಿಗೆ ಕಂಚಿನ ಪದಕ: ರಾಷ್ಟ್ರಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ತಾಲೂಕಿನ ಇಸಳೂರಿನ ಶ್ರೀ ರಾಜರಾಜೇಶ್ವರೀ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಿರಿ ಅಶೋಕ ಹೆಗಡೆ ಜು‌.28ರಂದು ಬೆಂಗಳೂರಿನಲ್ಲಿ ಏರ್ಪಟ್ಟ ಪ್ರೀಮಿಯರ್ ಲೀಗ್-2024ರ ರೋಲರ್ ಹಾಕಿ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಕಂಚಿನ ಪದಕವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾಳೆ. ಹಾಗೂ ಮುಂದೆ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ತಮ್ಮ ‘ಕೋಬ್ರಾ ಖಾಯಿ’ ತಂಡದ ನಾಯಕಿಯಾಗಿ ಆಯ್ಕೆಯಾಗಿರುತ್ತಾಳೆ. ರಾಷ್ಟ್ರಮಟ್ಟದಲ್ಲಿ ಇವರ ತಂಡವು ಕರ್ನಾಟಕದ ಪ್ರತಿನಿಧಿತ್ವವನ್ನು ವಹಿಸಲಿದೆ. ಶ್ರೀನಿಕೇತನ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ವಿದ್ಯಾರ್ಥಿನಿಯ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಹಾಗೂ ರಾಷ್ಟ್ರಮಟ್ಟದಲ್ಲಿ ಅವರ ತಂಡವು ಚಿನ್ನದ ಪದಕವನ್ನು ತಮ್ಮದಾಗಿಸಿಕೊಳ್ಳಲೆಂದು ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top