Slide
Slide
Slide
previous arrow
next arrow

ಮೈಸೂರ್ ಚಲೋ ಪಾದಯಾತ್ರೆಯಲ್ಲಿ ಜಿಲ್ಲೆಯ ಹಲವರು ಭಾಗಿ

300x250 AD

ಕುಮಟಾ: ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ಭಾರೀ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ವತಿಯಿಂದ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಕುಮಟಾ ಶಾಸಕರಾದ ದಿನಕರ ಶೆಟ್ಟಿ, ಶಿವಾನಂದ ಕಡತೋಕಾ ಸೇರಿದಂತೆ ಹಲವು ಮುಖಂಡರು ಹೆಜ್ಜೆ ಹಾಕಿದರು.

ಸತತ ಎಂಟನೇ ದಿನದ ಪಾದಯಾತ್ರೆ ಮೈಸೂರಿನ ಎನ್.ಎಸ್. ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಮಠದಿಂದ ಪ್ರಾರಂಭಗೊಂಡು ಶ್ರೀ ಮಹಾರಾಜ ಮೈದಾನದಲ್ಲಿ ಲಕ್ಷಾಂತರ ಜನ ಭಾಗವಹಿಸುವ ಮೂಲಕ ಬೃಹತ್ ಸಮಾವೇಶವಾಗಿ ಮಾರ್ಪಟ್ಟಿತು. ಈ ಬೃಹತ್ ಸಮಾವೇಶದಲ್ಲಿ ಕಡ್ಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ಗೋವಿಂದ ಗೌಡ, ಹಳದಿಪುರ ಗ್ರಾಪಂ ಸದಸ್ಯ ನವೀನ ನಾಯ್ಕ, ಬಾಲು ಭಂಡಾರಿ ಮತ್ತು ಜಿಲ್ಲೆಯ ಬಿಜೆಪಿ, ಜೆಡಿಎಸ್ ಪಕ್ಷದ ಹಲವರು ಪಾಲ್ಗೊಂಡರು.

300x250 AD
Share This
300x250 AD
300x250 AD
300x250 AD
Back to top