Slide
Slide
Slide
previous arrow
next arrow

ಸೆ.24ಕ್ಕೆ ಕುಮಟಾದಲ್ಲಿ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚೆ

300x250 AD

  ಕುಮಟಾ: ತಾಲೂಕಿನ ಅರಣ್ಯವಾಸಿಗಳ ಸಮಸ್ಯೆಗಳ ಚರ್ಚಿಸುವ ಕುರಿತು ಸೆ.೨೪ ಮಂಗಳವಾರ ಮುಂಜಾನೆ ೧೦-೩೦ ಕ್ಕೆ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಕಛೇರಿಯಲ್ಲಿ ಹಿರಿಯ ಅಧಿಕಾರಿಯೊಂದಿಗೆ ಸಮಾಲೋಚಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕುಮಟದಲ್ಲಿ ಅರಣ್ಯವಾಸಿಗಳ ಸಾಗುವಳಿಗೆ ಸಂಬಂಧಿಸಿ ಅರಣ್ಯ ಸಿಬ್ಬಂಧಿಗಳಿಂದ ವ್ಯತಿರಿಕ್ತವಾಗಿ ಕಾರ್ಯ ಜರಗುತ್ತಿರುವದರಿಂದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲು ಅವಕಾಶ ಕೋರಿ ಅರಣ್ಯ ಸಂರಕ್ಷಣಾ ಅಧಿಕಾರಿ ಶಿರಸಿ ಅವರಿಗೆ ಪತ್ರ ಬರೆದಿದ್ದು ಅರಣ್ಯವಾಸಿಗಳ ಸಮಸ್ಯೆಗಳನ್ನು ಚರ್ಚಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

300x250 AD

       ಆಸಕ್ತರು ಸೆ. ೨೪ ರ  ಮುಂಜಾನೆ ೧೦-೩೦ ಕ್ಕೆ ಹಳೇ ತಹಶೀಲ್ದಾರ ಕಛೇರಿ ಆವರಣದಲ್ಲಿ ಆಗಮಿಸಬೇಕೇಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ಕೋರಿದ್ದಾರೆ.

Share This
300x250 AD
300x250 AD
300x250 AD
Back to top