Slide
Slide
Slide
previous arrow
next arrow

ರಸ್ತೆ ಬದಿಯ ಮುಳ್ಳುಗಂಟಿಗಳಿಂದ ವಾಹನ ಸವಾರರಿಗೆ ತೊಂದರೆ: ತೆರವಿಗೆ ಆಗ್ರಹ

300x250 AD

ಕಾರವಾರ: ತಾಲೂಕಿನ ಕಡವಾಡ ವೈಲಮಕೇರಿ ರಸ್ತೆ ಬದಿಯಲ್ಲಿ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದುಕೊಂಡಿದ್ದು ವಾಹನ ಸವಾರರು ಈ ರಸ್ತೆಯಲ್ಲಿ  ಸಂಚರಿಸುವಾಗ ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಆಗ್ರಹಿಸಿದ್ದಾರೆ.

ಕಡವಾಡ  ಹಾಗೂ ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಮಕೇರಿ ಸುಲ್ತಾನಪುರ ಗಡಿಭಾಗದಲ್ಲಿ ನೂತನ ಸೇತುವೆಯ ಸಮೀಪದಿಂದ ರಸ್ತೆ ಬದಿಯುದ್ದಕೂ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದುಕೊಂಡಿದ್ದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿನ ಮುಳ್ಳಿನ ಗಿಡಗಂಟಿಗಳು ಬೆಳೆದುಕೊಂಡು ರಸ್ತೆವರೆಗೂ ಆವರಿಸಿವೆ. ವಾಹನ ಸವಾರರ ಮೈ ಕೈ ಕಣ್ಣಿಗೆ  ಬಡಿಯುತ್ತಿವೆ. ಮತ್ತು ಹಗಲು ರಾತ್ರಿ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು ಓಡಾಡುತ್ತಿದ್ದು,  ರಾತ್ರಿ ವೇಳೆಯಲ್ಲಿ ವಾಹನ ಸವಾರರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದ
ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top