Slide
Slide
Slide
previous arrow
next arrow

ಶಿರಸಿಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆ: ಪಕ್ಷ ಸಂಘಟನೆ ಕುರಿತು ಚರ್ಚೆ

300x250 AD

ಶಿರಸಿ: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸಾಯಿ ಗಾಂವ್ಕರ್ ನೇತೃತ್ವದಲ್ಲಿ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.

ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ್ ಮಾತನಾಡಿ, ಪದಾಧಿಕಾರಿಗಳಿಗೆ ಶಿಸ್ತು, ಪಕ್ಷದ ಚೌಕಟ್ಟು ಹಾಗೂ ಕಾರ್ಯಕರ್ತರನ್ನು ಮತ್ತು ಸ್ಥಳೀಯ ಮುಖಂಡರನ್ನು ನಿಭಾಯಿಸುವ ರೀತಿಯನ್ನು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಯಿ ಗಾಂವ್ಕರ್ ಪಕ್ಷದ ಪ್ರತಿಯೊಬ್ಬ ಪಧಾಧಿಕಾರಿಯನ್ನು ವಯುಕ್ತಿಕವಾಗಿ ಮಾತನಾಡಿಸಿ, ಅವರ ಅಭಿಪ್ರಾಯವನ್ನು ಸಂಗ್ರಹಿಸಿದರು. ತದನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಸಂಘಟನಾತ್ಮಕ ಚಟುವಟಿಕೆಗಳನ್ನು ತೀವ್ರಗೊಳಿಸಲು ಮತ್ತು ಬಿಜೆಪಿಯವರು ಮಾಡುತ್ತಿರುವ ಸುಳ್ಳು ಆರೋಪಗಳ ವಿರುದ್ದ ತಕ್ಕ ಉತ್ತರ ನೀಡಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ನಿವೇದಿತ ಆಳ್ವಾ, ಜಿಲ್ಲಾ ಉಪಾಧ್ಯಕ್ಷರಾದ ರಾಮಾ ಮೊಗೇರ, ಆರ್.ಎಚ್. ನಾಯ್ಕ್,ವಿ.ಎನ್. ನಾಯ್ಕ್ ಬೇಡ್ಕಣಿ, ಕೆಪಿಸಿಸಿ ಸದಸ್ಯರಾದ ಸದಾನಂದ ದಬಗಾರ,‌ ಅಜರೆಕರ,ವಿವೇಕ ಹೆಬ್ಬಾರ,ಮಹಿಳಾ ಅಧ್ಯಕ್ಷರಾದ ಸುಜಾತಾ ಗಾವಂಕರ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು

300x250 AD
Share This
300x250 AD
300x250 AD
300x250 AD
Back to top