Slide
Slide
Slide
previous arrow
next arrow

70ನೇ ವನ್ಯಜೀವಿ ಸಪ್ತಾಹ: ದಾಂಡೇಲಿಯಲ್ಲಿ ಜಾಗೃತಿ ಜಾಥಾ

300x250 AD

ದಾಂಡೇಲಿ : ಕಾಳಿ ಹುಲಿ ಸಂರಕ್ಷಿತ ವನ್ಯಜೀವಿ ಇಲಾಖೆ, ಅರಣ್ಯ ಇಲಾಖೆ, ರೋಟರಿ ಕ್ಲಬ್ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಡಿ 70ನೇ ವನ್ಯಜೀವಿ ಸಪ್ತಾಹದ ನಿಮಿತ್ತ ಜಾಗೃತಿ ಜಾಥಾ ಕಾರ್ಯಕ್ರಮವನ್ನು ನಗರದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ನಗರಸಭೆ ಆವರಣದಿಂದ ಆರಂಭಗೊಂಡ ಈ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಕಳ್ಳಿಮಠ, ರೋಟರಿ ಕ್ಲಬ್ ಅಧ್ಯಕ್ಷ ರಾಹುಲ್ ಬಾವಾಜಿ, ಪ್ರಧಾನ ಕಾರ್ಯದರ್ಶಿ ಅಶುತೋಷ್ ಕುಮಾರ್ ರಾಯ್, ರೋಟರಿ ಕ್ಲಬ್ಬಿನ ಪ್ರಮುಖರುಗಳಾದ ಎಸ್.ಜಿ.ಬಿರಾದಾರ್, ಆರ್.ಪಿ. ನಾಯ್ಕ, ಸುಧಾಕರ ಶೆಟ್ಟಿ, ರಾಜೇಶ ವೆರ್ಣೇಕರ, ರವಿಕುಮಾರ್ ನಾಯಕ, ಪೊಲೀಸ್ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ರೋಟರಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಜಾಗೃತಿ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.

300x250 AD
Share This
300x250 AD
300x250 AD
300x250 AD
Back to top