Slide
Slide
Slide
previous arrow
next arrow

ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

300x250 AD

ಕಾರವಾರ: ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿರುವ ವಿವಿಧ ಯೋಜನೆಗಳಾದ ಚರ್ಮಕಾರರ ಕಿರು ಆರ್ಥಿಕ ನೇರಸಾಲ, ಸ್ವಾವಲಂಭಿ/ಸಂಚಾರಿ ಮಾರಾಟ ಮಳಿಗೆಯ ಆರಂಭ, ಪಾದುಕೆ ಕುಟೀರ, ಚರ್ಮಶಿಲ್ಪಿ ಮತ್ತು ಚರ್ಮ ಕೈಗಾರಿಕೆಯಲ್ಲಿ ಕೌಶಲ್ಯ ಉನ್ನತೀಕರಣ ತರಬೇತಿಗಳ ಯೋಜನೆಯನ್ನು ಪಡೆಯಲು ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ. ಅನಂತರ ಬಂದ ಅರ್ಜಿಗಳನ್ನು ಪರಿಗಣಿಸಲು ಅವಕಾಶ ಇರುವುದಿಲ್ಲ.
ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲಾ ಕುಶಲಕರ್ಮಿಗಳು ಹಾಗೂ ಅರ್ಹ ಫಲಾನುಭವಿಗಳು ಈ ಯೋಜನೆಗಳ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿಯ ಮೂಲಪ್ರತಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ಬೆಳಗಾವಿನಲ್ಲಿರುವ ಲಿಡ್ಕರ್ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಸಂಯೋಜಕ ಮಂಜುನಾಥ ಕಾಂಬಳೆ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರ ಮೊಬೈಲ್ ಸಂಖ್ಯೆ Tel:+919482204802 ಅಥವಾTel:+9108312422643 ಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

300x250 AD
Share This
300x250 AD
300x250 AD
300x250 AD
Back to top