Slide
Slide
Slide
previous arrow
next arrow

ಸಂಸದರ ಕಾರ್ಯಾಲಯ ಉದ್ಘಾಟನೆ

300x250 AD

ಕಾರವಾರ: ಉತ್ತರ ಕನ್ನಡ ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜಿಲ್ಲಾಧಿಕಾರಿ ಕಚೇರಿಯ 2 ನೇ ಮಹಡಿಯಲ್ಲಿ ನವೀಕೃತ ಸಂಸದರ ಕಚೇರಿಯನ್ನು ಮಂಗಳವಾರ ಉದ್ಘಾಟನೆ ಮಾಡಿದರು.

ನಂತರ ಮಾತನಾಡಿದ ಸಂಸದರು, ಸರ್ಕಾರ ಮತ್ತು ಜನರ ಮಧ್ಯ ಸಂಪರ್ಕ ಕೊಂಡಿಯಾಗಿ ಸಂಸದನಾದ ದಿನದಿಂದ ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸುತ್ತಾ ಬಂದಿದ್ದು, ಸಂಸದರ ಕಚೇರಿ ಜನರ ಕಾರ್ಯಾಲಯವಾಗಿದೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಇಲ್ಲಿ ಸಲ್ಲಿಸಬಹುದಾಗಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಮತ್ತಿತ್ತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top