Slide
Slide
Slide
previous arrow
next arrow

ಮತ್ತಿಘಟ್ಟಾ ಭಾಗದ ರಸ್ತೆ ಸಮಸ್ಯೆಗೆ ಶೀಘ್ರ ಪರಿಹಾರ: ಡಿಸಿ ಲಕ್ಷ್ಮಿಪ್ರಿಯಾ ಭರವಸೆ

300x250 AD

ಡಿಸಿ ಕಛೇರಿ ಎದುರು ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ

ಶಿರಸಿ: ತಾಲೂಕಿನ ಮತ್ತಿಘಟ್ಟಾ ಸಮೀಪದ ಕೆಳಗಿನಕೇರಿ ಸೇರಿ ಆರೇಳು ಹಳ್ಳಿಗಳಿಗೆ ಸಂಪರ್ಕ ಕೊಂಡಿಯಾಗಿರುವ ರಸ್ತೆಯು ಭೂಕುಸಿತದಿಂದಾಗಿ ಕಳೆದ ಮಳೆಗಾಲದಲ್ಲಿ ಹಾನಿಯುಂಟಾಗಿತ್ತು. ಈ ಸ್ಥಳಕ್ಕೆ ಕೂಡಲೇ ಭೇಟಿ ನೀಡಿ ಗ್ರಾಮಸ್ಥರ ರಸ್ತೆ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಭರವಸೆ ನೀಡಿದ್ದಾರೆ.

ಸೋಮವಾರ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಮತ್ತಿಘಟ್ಟಾ ಕೆಳಗಿನಕೇರಿ ಗ್ರಾಮಸ್ಥರು ಕಾರವಾರದ ಜಿಲ್ಲಾಧಿಕಾರಿ ಕಛೇರಿ ಎದುರು ರಸ್ತೆಗಾಗಿ ಪ್ರತಿಭಟನೆಯನ್ನು ನಡೆಸಿದ್ದರು. ಈ ವೇಳೆ ಮಾತನಾಡಿದ ಅನಂತಮೂರ್ತಿ ಹೆಗಡೆ ಕಳೆದ ಎರಡು ವರ್ಷಗಳಿಂದ ಸತತ ಭೂಕುಸಿತದ ಪರಿಣಾಮವಾಗಿ ಈ ಪ್ರದೇಶದ ಸಂಪರ್ಕ ಕೊಂಡಿಯಾಗಿರುವ ರಸ್ತೆಯು ಹಾಳಾಗಿದೆ. ಕಳೆದ ಮಳೆಗಾಲದಲ್ಲಿ15 ದಿನ ಈ ಭಾಗಕ್ಕೆ ಯಾರ ಸಂಪರ್ಕವೂ ಇಲ್ಲವಾಗಿತ್ತು. ಸ್ಥಳೀಯ ಶಾಸಕರು ಒಮ್ಮೆಯೂ ಈ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಗ್ರಾಮಸ್ಥರೇ ಹಣ ಹಾಕಿ ತುರ್ತು ರಸ್ತೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಸರಕಾರ ಇದೆಯೋ ಸತ್ತು ಹೋಗಿದೆಯೋ ತಿಳಿಯುತ್ತಿಲ್ಲ. ಈ ಕೂಡಲೇ ಮಾನ್ಯ ಉಸ್ತುವಾರ ಸಚಿವರು ಹಾಗು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಿದರು.

ಇದೇ ವೇಳೆ ಕೆಳಗಿನಕೇರಿ ಗ್ರಾಮದ ರೇಣುಕಾ ಸಿದ್ದಿ ಮಾತನಾಡಿ, ನಮಗೆ ಕೆಲಸಕ್ಕೆ ಪ್ರತಿದಿನ ತೆರಳಲು ರಸ್ತೆಯ ಅವಶ್ಯಕತೆ ಇದೆ. ಮಕ್ಕಳಿಗೆ ಶಾಲೆಗೆ ಹೋಗಲು, ರೇಷನ್ ತರಲು ರಸ್ತೆಯ ಅನಿವಾರ್ಯತೆ ಇದೆ. ಮತ್ತೆ ಈ ಮಳೆಗಾಲದಲ್ಲಿ ಭೂಕುಸಿತ ಸಂಭವಿಸಿದರೆ ಮತ್ತೆ ಸಮಸ್ಯೆ ಆಗುವುದರಿಂದ, ಜಿಲ್ಲಾಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಬಂದು ಸಮಸ್ಯೆ ಪರಿಹರಿಸಬೇಕೆಂದರು.

ಈ ಕೂಡಲೇ ನಮ್ಮ ಗ್ರಾಮಕ್ಕೆ ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಮಾನ್ಯ ಶಾಸಕರು ತಕ್ಷಣ ಆಗಮಿಸಿ, ಸ್ಥಳ ವೀಕ್ಷಣೆ ನಡೆಸಿ ತುರ್ತು ಕ್ರಮ ಕೈಗೊಳ್ಳಬೇಕು. ಮುಂಬರುವ ಮಳೆಗಾಲದೊಳಗೆ ನಮ್ಮ 38 ಕುಟುಂಬಕ್ಕೆ ಅನಿವಾರ್ಯ ಆಗಿರುವ ಹಳ್ಳಿಯ ರಸ್ತೆ ಸಂಪರ್ಕವನ್ನು ನಿರ್ಮಿಸಿಕೊಡಬೇಕು. ಮತ್ತು ಭೂ ಕುಸಿತಕ್ಕೆ ತಡೆಯೊಡ್ಡಲು ಈ ರಸ್ತೆಗೆ ತಡೆಗೋಡೆ ನಿರ್ಮಿಸಲು ಮತ್ತು ಕೆಲಸ ಆರಂಭಿಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಗ್ರಾಮಸ್ಥರು ತಮ್ಮ ಬೇಡಿಕೆಯನ್ನು ಜಿಲ್ಲಾಧಿಕಾರಿಗಳಲ್ಲಿ ವಿನಂತಿಸಿಕೊಂಡರು.

300x250 AD

ಪ್ರತಿಭಟನೆಯಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಶ್ರೀಕಾಂತ ಬಳ್ಳಾರಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ, ಶಿರಸಿ ಗ್ರಾಮೀಣ ಮಂಡಲ ಅಧ್ಯಕ್ಷೆ ಉಷಾ ಹೆಗಡೆ, ದೇವನಳ್ಳಿ ಪಂಚಾಯತ ಉಪಾಧ್ಯಕ್ಷೆ ಜಯಭಾರತಿ ಭಟ್ಟ, ಪಂಚಾಯತ ಸದಸ್ಯ ನಾರಾಯಣ ಹೆಗಡೆ, ಪ್ರಮುಖರಾದ ಗಣಪತಿ ಸಿದ್ದಿ ಸೇರಿದಂತೆ 50 ಕ್ಕೂ ಅಧಿಕ ಮತ್ತಿಘಟ್ಟಾ ಕೆಳಗಿನಕೇರಿ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಖೋಟ್ :

ಜಿಲ್ಲಾಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ಆರಂಭಿಸಲು, ಆದೇಶ ನೀಡಿ ಮಳೆಗಾಲದ ಆರಂಭದೊಳಗೆ ರಸ್ತೆ ಸಮಸ್ಯೆ ಬಗೆಹರಿಸಬೇಕು. ಆ ಮೂಲಕ 38 ಕುಟುಂಬಗಳಿಗೆ ನ್ಯಾಯ ಒದಗಿಸಬೇಕಿದೆ. – ಅನಂತಮೂರ್ತಿ ಹೆಗಡೆ, ಬಿಜೆಪಿ ಮುಖಂಡರು

Share This
300x250 AD
300x250 AD
300x250 AD
Back to top