ದಾಂಡೇಲಿ : ತಾಲೂಕಿನ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನದ ನಿಮಿತ್ತವಾಗಿ ಸ್ತ್ರೀ ಚೇತನ ಅಭಿಯಾನ ದುಡಿಯೋಣ ಅಭಿಯಾನ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.
ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸ್ತ್ರೀ ಚೇತನ ಅಭಿಯಾನದ ಬಗ್ಗೆ ಸಮರ್ಪಕ ಮಾಹಿತಿಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂತೋಷ ಹೆಳವರ, ಗ್ರಾಮ ಪಂಚಾಯತಿ ಸದಸ್ಯ ಲಕ್ಷ್ಮಣ ಜಾಧವ, ಐಇಸಿ ಸಂಯೋಜಕಿ ಸೌಂದರ್ಯ ಕುರಕುರಿ, ಪುಂಡಲೀಕ ಹಾಗೂ ನರೇಗಾ ಕೂಲಿಕಾರ್ಮಿಕರು ಮತ್ತು ಮಹಿಳೆಯರು ಭಾಗವಹಿಸಿದ್ದರು.