ಸಿದ್ದಾಪುರ: ಮನಸ್ಸು ಮತ್ತು ದೇಹವನ್ನು ಕೂಡಿಸುವುದು ಯೋಗ. ಯೋಗಾಸನ ಮಾಡುವುದರಿಂದ ಅನೇಕ ಕಾಯಿಲೆಗಳನ್ನು ಕಡಿಮೆ ಮಾಡಿಕೊಳ್ಳಬಹುದು ಎಂದು ಸಿದ್ದಾಪುರದ ಓಂಕಾರ ಕ್ಲಿನಿಕ್ನ ಡಾ.ಎಸ್.ಆರ್.ಹೆಗಡೆ ಹಾರ್ಸಿಮನೆ ಹೇಳಿದರು.
ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಓಂ ಶಾಂತಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ರಾಜಯೋಗಿನಿ ಬಿ.ಕೆ.ವೀಣಾಜಿ ಶಿರಸಿ ಮಾತನಾಡಿ ಯೋಗ ಮಾಡುವುದರಿಂದ ಸಾಮಾಜಿಕ ಒತ್ತಡ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಬಹುದಾಗಿದೆ. ನಿತ್ಯ ಯೋಗಾಭ್ಯಾಸ ಮಾಡಬೇಕೆಂದರು.
ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್, ಸಿದ್ದಾಪುರ ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ ಮಾತನಾಡಿದರು. ಬಿ.ಕೆ.ದೇವಕಿ ಕಾರ್ಯಕ್ರಮ ನಿರ್ವಹಿಸಿದರು. ಲೀನಾ ಫರ್ನಾಂಡಿಸ್ ಸ್ವಾಗತಿಸಿದರು. ಸುವರ್ಣ ಹೆಗಡೆ ವಂದಿಸಿದರು. ಕಾರ್ಯಕ್ರಮದ ಪೂರ್ವದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಮೊದಲ ಆಡಳಿತ ಅಧಿಕಾರಿಣಿ ಜಗದಂಬ ಸರಸ್ವತಿ ಅಮ್ಮಾರವರಿಗೆ ಪುಷ್ಪನಮನ ಸಲ್ಲಿಸಲಾಯಿತು.