ಯಲ್ಲಾಪುರ: ಸುಳ್ಳು ಜಾತಿ ಪ್ರಮಾಣಪತ್ರ ಪಡೆದ ವ್ಯಕ್ತಿಯೊಬ್ಬನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.
ಕಿರವತ್ತಿಯ ಮೌಲಾಲಿ ಮಹಮ್ಮದ್ ಸಾಬ್ ಪಟೇಲ್ ಎಂಬಾತ ಕಳೆದ 2017 ರಲ್ಲಿ ಇಲ್ಲಿನ ತಹಸೀಲ್ದಾರ್ ಕಚೇರಿಯಿಂದ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿದ್ದ. ಮುಸ್ಲಿಂ ಸಮುದಾಯದವನಾದರೂ ಸುಳ್ಳು ದಾಖಲೆಗಳನ್ನು ನೀಡಿ, ಸಿದ್ದಿ ಸಮುದಾಯದವನೆಂದು ಜಾತಿ ಪ್ರಮಾಣಪತ್ರ ಪಡೆದಿರುವ ಆರೋಪದಡಿ ವಂಚನೆ ಪ್ರಕರಣ ದಾಖಲಾಗಿದೆ.
ಪೆÇಲೀಸರು ಪ್ರಥಮ ವರ್ತಮಾನ ವರದಿಯನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರಿನ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಕಳುಹಿಸಿದ್ದಾರೆ.