ಕುಮಟಾ: ತನ್ನ ಕಬಂಧ ಬಾಹುಗಳನ್ನು ಚಾಚಿ ಹೆಚ್ಚುತ್ತಿರುವ ಕರೋನಾಕ್ಕೆ ಜಿಲ್ಲೆಯ ಆರು ಸಾವಿರಕ್ಕಿಂತಲೂ ಹೆಚ್ಚು ಜನ ತುತ್ತಾಗಿದ್ದು, ಶಾಸಕ ದಿನಕರ ಶೆಟ್ಟಿ ಕೋವಿಡ್ ಸೋಂಕು ದೃಢಪಟ್ಟಿದೆ.
ರೋಗ ಲಕ್ಷಣ ರಹಿತವಾಗಿರುವ ಅವರು ತಾಲೂಕು ಆಸ್ಪತ್ರೆಯಲ್ಲಿ ರಾ್ಯಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಅವರಿಗೆ ಸೋಂಕು ದೃಢಪಟ್ಟಿದೆ.
ಅವರ ಕುಟುಂಬದ ಆಪ್ತರೊಬ್ಬರಿಗೆ ಇತ್ತೀಚೆಗೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರಿಂದ ಸೋಂಕು ತಗುಲಿದೆ ಎನ್ನಲಾಗಿದೆ. ಅವರ ಪತ್ನಿ, ಮಕ್ಕಳ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.
ಸದ್ಯ ಶಾಸಕ ದಿನಕರ ಶೆಟ್ಟಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಮನೆಗೆ ಮರಳಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ.