ಅಂಕೋಲಾ: ತಾಲೂಕಿನ ಕೊಡಸಣಿ ಕ್ರಾಸ್ ಬಳಿ ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಯಾವುದೇ ಪರವಾನಗಿ ಇಲ್ಲದೇ ಸಾಗಿಸುತ್ತಿದ್ದ 17 ಕೋಣಗಳನ್ನು ಅಂಕೋಲಾ ಪೆÇಲೀಸರು ರಕ್ಷಿಸಿದ್ದು, ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಿದ್ದ ದೊಡ್ಡ ಲಾರಿ ಬೆಂಗಾವಲಾಗಿ ಬಂದಿದ್ದ ಇನೋವಾ ವಾಹನ ಜಪ್ತು ಮಾಡಿ ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಳ್ತಂಗಡಿ ನಿವಾಸಿ ಲಾರಿ ಚಾಲಕ ಹೈದರ್ ರೆಹಮನ್ ಬ್ಯಾರಿ(40), ಅಂಕೋಲಾ ಶಿರಗುಂಜಿಯ ಬೊಮ್ಮಯ್ಯ ಬೀರಣ್ಣ ನಾಯಕ (80), ಹಾಸನ ಹಳೇಕೊಪ್ಪಲಿನ ಮಂಜೇಗೌಡ ಜವರೇಗೌಡ(62), ಕೇರಳ ಕಾಸರಗೋಡದ ಅಬ್ದುಲ್ ರಿಯಾಜ್ ಮಹಮ್ಮದ್ (27) ಬಂಧಿತ ಆರೋಪಿಗಳಾಗಿದ್ದು ಇನ್ನೊರ್ವ ಆರೋಪಿ ಕೇರಳದ ಅಬುಬಕರ್ ರಿಯಾಜ್ ಎಂಬಾತ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ.
ಆರೋಪಿತರಿಂದ 2ಲಕ್ಷ 25 ಸಾವಿರ ಮೌಲ್ಯದ 17 ಕೋಣಗಳು, 6ಲಕ್ಷ ಮೌಲ್ಯದ ಲಾರಿ 3 ಲಕ್ಷ ಮೌಲ್ಯದ ಇನೋವಾ ವಾಹನ, 47 ಸಾವಿರ ಮೌಲ್ಯದ ಮೂರು ಮೊಬೈಲ್ ಪೆÇೀನುಗಳು ಮತ್ತು 30 ಸಾವಿರ ನಗದು ಹಣ ವಶಪಡಿಸಿಕೊಳ್ಳಲಾಗಿದೆ.