ಬೆಂಳೂರು: ಅ. 25 ರ ವರೆಗೂ ಕೇರಳದಲ್ಲಿ ಮಳೆ ಮುಂದುವರಿಯುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೂ ಎಚ್ಚರಿಕೆಯಿಂದ ಇರುವಂತೆ ಹೇಳಿದ್ದಾರೆ.
ಕೇರಳದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹಾಗೆಯೇ ಮೀನುಗಾರಿಕೆಗಾಗಿ ಸಹ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಸಲಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಎಚ್ಚರಿಕೆ ವಹಿಸುವಂತೆ ಸಚಿವ ಆರ್.ಅಶೋಕ್ ಸೂಚಿಸಿದ್ದಾರೆ.
ಕರ್ನಾಟಕದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಮುನ್ನೆಚ್ಚರಿಕೆ ವಹಿಸುವಂತೆ ಅಶೋಕ್ ತಿಳಿಸಿದ್ದಾರೆ. ಮಳೆಯಿಂದಾಗಿ ಸಂಭವಿಸಬಹುದಾದ ಯಾವುದೇ ರೀತಿಯ ಅಪಾಯವನ್ನು ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಅವರು ತಿಳಿಸಿದ್ದಾರೆ.