Slide
Slide
Slide
previous arrow
next arrow

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್; ತುಟ್ಟಿ ಭತ್ಯೆ ಶೇ.3 ರಷ್ಟು ಹೆಚ್ಚಳ

300x250 AD

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ದೀಪಾವಳಿ ಸಂದರ್ಭದಲ್ಲಿ ಸಂತಸ ಹೆಚ್ಚಿಸುವ ಕ್ರಮವೊಂದನ್ನು ತೆಗೆದುಕೊಂಡಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 1.7.2021 ರಿಂದ ಪೂರ್ವಾನ್ವಯವಾಗುವಂತೆ ಬಾಕಿ ಇದ್ದ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್)ಕ್ಕಾಗಿ ಹೆಚ್ಚುವರಿ ಕಂತಿನ ಹಣ ಬಿಡುಗಡೆಗೆ ಅನುಮೋದನೆ ನೀಡಿದೆ. ಬೆಲೆ ಏರಿಕೆಯನ್ನು ಸರಿದೂಗಿಸಲು ಹಾಲಿ ಇರುವ ಶೇ.28ರಷ್ಟು ಮೂಲ ಪಾವತಿ/ ಪಿಂಚಣಿ ದರದಲ್ಲಿ ಶೇ.3ರಷ್ಟು ಹೆಚ್ಚಳವಾಗಲಿದೆ.

300x250 AD

ಜುಲೈ 1 ರಿಂದಲೇ ಈ ಆದೇಶ ಪೂರ್ವಾನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಸೌಲಭ್ಯದಿಂದ 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರು ಅನುಕೂಲ ಪಡೆಯಲಿದ್ದಾರೆ.
ನ್ಯೂಸ್ 13

Share This
300x250 AD
300x250 AD
300x250 AD
Back to top