ಶಿರಸಿ: ಎಂಇಎಸ್ ಎಂ.ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಶಿರಸಿ ಇವರ ಆಯೋಜನೆಯಲ್ಲಿ ಉಪನ್ಯಾಸಕರಿಗೆ ಅ.29 ಶುಕ್ರವಾರ ಬೆಳಿಗ್ಗೆ 11.30ರಿಂದ 2 ಗಂಟೆ ವರೆಗೆ ನೂತನ ಶಿಕ್ಷಣ ಪದ್ದತಿಯ ಬಗ್ಗೆ ಉಪನ್ಯಾಸಕರಿಗೆ ಕಾರ್ಯಾಗಾರ ನಡೆಯಲಿದೆ.
ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ವಿಜ್ಞಾನ ಕಾಲೇಜಿನ ರಸಾಯನಶಾಸ್ತ್ರದಲ್ಲಿ ಸಹ ಪ್ರಾಧ್ಯಾಪಕ ಡಾ.ಸುರೇಶ್. ಎಂ. ತುವಾರ್ ಉಪಸ್ಥಿತರಿರುವರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯೆ ಡಾ.ಕೋಮಲಾ ಭಟ್ & ಕಾಲೇಜಿನ ಅಧ್ಯಕ್ಷರಾದ ಜಿ ಎಂ ಹೆಗಡೆ ಉಪಸ್ಥಿತರಿರುವರು.