ಶಿರಸಿ: ಜುಲೈ 2021 ನೇ ಮಾಹೆಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ನೀಡಲಾಗುವ ರೂ. 5 ಪ್ರೋತ್ಸಾಹ ಧನವು ಆಧಾರ ಜೋಡಣೆಯಾದ ಹಾಲು ಉತ್ಪಾದಕ ರೈತರ ಖಾತೆಗೆ ಅ.26 ಮಂಗಳವಾರ ಜಮಾ ಆಗಿರುತ್ತದೆ ಎಂದು ಧಾರವಾಡ ಹಾಲು ಒಕ್ಕೂಟದ ಕಲ್ಯಾಣ ಸಂಘದ ಅಧ್ಯಕ್ಷರು ಹಾಗೂ ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೆ.2021 ರ ವರೆಗಿನ ಪ್ರೋತ್ಸಾಹ ಧನದ ಮಾಹಿತಿಯನ್ನು ನಮ್ಮಿಂದ ಈಗಾಗಲೇ ಕ್ಷೀರ ಸಿರಿ ತಂತ್ರಾಶದಲ್ಲಿ ಅಳವಡಿಸಲಾಗಿದ್ದು, ಜುಲೈ 2021 ರ ವರೆಗೆ ಸರ್ಕಾರದಿಂದ ಅತ್ಯಂತ ತ್ವರಿತವಾಗಿ ಪ್ರೋತ್ಸಾಹ ಧನವನ್ನು ಹಾಲು ಉತ್ಪಾದಕ ರೈತರ ಖಾತೆಗೆ ಜಮಾ ಮಾಡಲಾಗಿದ್ದು, ಅಗಸ್ಟ್ ಮತ್ತು ಸಪ್ಟೆಂಬರ್ ಮಾಹೆಗಳ ಪ್ರೋತ್ಸಾಹ ಧನ ಶೀಘ್ರದಲ್ಲೇ ರೈತರ ಖಾತೆಗೆ ಸರ್ಕಾರದಿಂದ ಜಮಾ ಆಗಲಿದೆ ಎಂದು ಅವರು ತಿಳಿಸಿದರು. ಹಾಗೂ ಪ್ರೋತ್ಸಾಹ ಧನ ಜಮಾ ಆಗದ ರೈತರು ಆಯಾ ವ್ಯಾಪ್ತಿಯ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಿದ್ದಾರೆ.