Slide
Slide
Slide
previous arrow
next arrow

ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ದೇವಾಲಯದಲ್ಲಿ ಗೋಪೂಜೆ ನಡೆಸಿ; ಸರ್ಕಾರ ಆದೇಶ

300x250 AD

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ದೇವಾಲಯಗಳಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ನಡೆಸುವಂತೆ ರಾಜ್ಯದ ಮುಜರಾಯಿ ಇಲಾಖೆ ತಿಳಿಸಿದೆ.

ಈ ಸಂಬಂಧ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ನ. 5 ರ ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಇದರಲ್ಲಿ ತಿಳಿಸಲಾಗಿದೆ.

300x250 AD

ಹಿಂದೂ ಧಾರ್ಮಿಕ ವಿಚಾರಗಳಲ್ಲಿ ಗೋವುಗಳಿಗೆ ವಿಶೇಷ ಸ್ಥಾನಮಾನ ಇದ್ದು, ಗೋವನ್ನು ಪೂಜಿಸಿದರೆ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುವುದು ಎಂಬ ನಂಬಿಕೆಯೂ ಇದೆ. ಈ ನಿಟ್ಟಿನಲ್ಲಿ ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ದೇಗುಲಗಳಲ್ಲಿ ಗೋಪೂಜೆ ನಡೆಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ನ್ಯೂಸ್ 13

Share This
300x250 AD
300x250 AD
300x250 AD
Back to top