ಮುಂಡಗೋಡ: ಬ್ಲಾಸಮ್ ಹಾಸ್ಪಿಟಲ್ ಹಾಗೂ ಗಿವ್ ಇಂಡಿಯಾ ಫೌಂಡೇಷನ್ ಅವರ ಸಹಯೋಗದಲ್ಲಿ ಆಯೋಜಿಸಿದ ‘ಉಚಿತ ಕೊವಿಡ್ ಲಸಿಕಾ ಅಭಿಯಾನವನ್ನು’ ಇಂದು ಕಾರ್ಮಿಕ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ತಾಲೂಕಿನ ಮೈನಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಕೊರೊನಾ ಸೋಂಕು ತೀವ್ರವಾಗಿ ಪ್ರಸರಣಗೊಳ್ಳುತ್ತಿದ್ದ ಸಮಯದಲ್ಲಿ ಜನರ ಜೀವಕ್ಕಾಗಿ ತಮ್ಮ ಹಾಗೂ ಕುಟುಂಬದ ಹಿತದೃಷ್ಟಿಯನ್ನೂ ಲೆಕ್ಕಿಸದೆ ಸರಕಾರದ ಜೊತೆ ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿದ ಆರೋಗ್ಯ ಇಲಾಖೆಯ ಎಲ್ಲ ಹಂತದ ಸಿಬ್ಬಂದಿ ಸೇವೆಯನ್ನು ಮರೆಯುವಂತಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರವಿಗೌಡ ಪಾಟೀಲ್, ಪಂಚಾಯತ ಅಧ್ಯಕ್ಷ ಬಸಯ್ಯ ನಡುವಿನಮನಿ, ಯುವ ಮೋರ್ಚಾ ಅಧ್ಯಕ್ಷ ಗಣೇಶ ಶಿರಾಲಿ, ಪ್ರಮುಖರಾದ ದೇವು ಪಾಟೀಲ್, ಸಂತೋಷ ಬೋಸ್ಲೆ, ಗ್ರಾಮ ಪಂಚಾಯತ ಸದಸ್ಯರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.