ದಾಂಡೇಲಿ: ಇಲ್ಲಿನ ಕಾಳಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ ಬಾಲಕ ಮೊಸಳೆ ಬಾಯಿಗೆ ಸಿಕ್ಕಿ ಮೃತಪಟ್ಟಿದ್ದು, ಶುಕ್ರವಾರ ಮಾಜಿ ಸಚಿವ, ಹಳಿಯಾಳ ಶಾಸಕ ಆರ್.ವಿ ದೇಶಪಾಣಡೆ ಬಾಲಕನ ಮನೆಗೆ ತೆರಳಿ ಪೋಷಕರಿಗೆ ಸಾಂತ್ವನ ಹೇಳಿದರು.
ಅಲ್ಲದೇ ಸರ್ಕಾರದಿಂದ ಅಗತ್ಯ ನೆರವು ಕಲ್ಪಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.