ಶಿರಸಿ: ದಾರಿ ಕೇಳುವ ನೆಪ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯ ಬಂಗಾರದ ಸರ ದೋಚಿ ಪರಾರಿಯಾದ ಘಟನೆ ಇಲ್ಲಿನ ಭತ್ತದ ಓಣಿಯಲ್ಲಿ ನಡೆದಿದೆ.
ಇಲ್ಲಿನ ಭತ್ತದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಬಿಳಿ ಕಾರಿನಲ್ಲಿ ಬಂದ ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ. ಉಷಾ ದಾಮೋದರ ಪೈ ಬಂಗಾರದ ಸರ ಕಳೆದುಕೊಂಡ ಮಹಿಳೆ. ಆರೋಪಿಗಳು ಕುಮಟಾಕ್ಕೆ ಹೋಗುವ ಮಾರ್ಗ ಕೇಳುವ ನೆಪದಲ್ಲಿ ಕಾರು ನಿಲ್ಲಿಸಿ ಮಹಿಳೆ ಬಳಿ ಕೇಳಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಹರಿದು ಪರಾರಿಯಾಗಿದ್ದಾರೆ. ಈ ಬಂಗಾರದ ಸರದ ಅಂದಾಜು ಮೌಲ್ಯ 1 ಲಕ್ಷಕ್ಕೂ ಅಧಿಕ ಎನ್ನಲಾಗಿದೆ, ಸಿ.ಪಿ.ಐ. ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ.