ಯಲ್ಲಾಪುರ: ಇತ್ತೀಚೆಗೆ ತಾಲೂಕಿನ ಖಾರೇವಾಡ ಗ್ರಾಮದಲ್ಲಿ ಧನಗರ ಗೌಳಿ ಸಮುದಾಯದ ಮಹಿಳೆ ಹೊಲದ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟ ಅಹಿತಕರ ಘಟನೆ ಸಂಭವಿಸಿದ್ದು, ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಖಾರೇವಾಡ ಗ್ರಾಮಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್ ಅನ್ನು ವಿತರಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವಿಜಯ ಮಿರಾಶಿ, ಉಪ ತಹಶೀಲ್ದಾರ್ ಸಿ.ಜಿ.ನಾಯ್ಕ ಹಾಗೂ ಕಿರವತ್ತಿ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.