ಶಿರಸಿ: ಕರ್ನಾಟಕ ರಾಜ್ಯ ಕೇರಂ ಅಸೋಸಿಯೇಷನ್ ಹಾಗೂ ಸ್ಟ್ರೈಕರ್ ಕೇರಂ ಅಸೋಸಿಯೇಷನ್ ನವರು ನಡೆಸಿದ ಕರ್ನಾಟಕ ರಾಜ್ಯ ಶ್ರೇಯಾಂಕ ಕೇರಂ ಪಂದ್ಯಾವಳಿಯಲ್ಲಿ ಶಿರಸಿಯ ಶ್ರೀಮತಿ ಶಾಲಿನಿ ಚಂದ್ರಶೇಖರ ಭಟ್ ತೃತೀಯ ಸ್ಥಾನ ಗಳಿಸಿದ್ದಾರೆ.
ಆ ಮೂಲಕ ಅವರು ಡಿಸೆಂಬರ್ ನಲ್ಲಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆಯಲಿರುವ ಫೆಡರೇಶನ್ ಕಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
ಇತ್ತೀಚಿಗೆ ದಾವಣಗೆರೆಯಲ್ಲಿ ನಡೆದ ಸರಕಾರಿ ನೌಕರರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದನ್ನು ಈ ವೇಳೆ ಸ್ಮರಿಸಬಹುದು.
ಇವರ ಸಾಧನೆಗೆ ಉತ್ತರ ಕನ್ನಡ ಜಿಲ್ಲಾ ಕೇರಂ ಅಸೋಸಿಯೇಷನ್ ಅಧ್ಯಕ್ಷರಾದ ರವಿ ಹೆಗಡೆ ಗಡಿಹಳ್ಳಿ ಅದೇ ರೀತಿ ಸ್ಫೂರ್ತಿ ಕೇರಂ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.