ಕಾರವಾರ: ಬೋಟ್ ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾರವಾರದ ಬೈತಖೋಲ್ ಬಂದರು ಪ್ರದೇಶದಲ್ಲಿ ಗುರುವಾರ ನಡೆದಿದೆ.
ತಮಿಳುನಾಡು ಮೂಲದ ಕುಮಾರ ಅಂದಿ ಮೃತಪಟ್ಟ ಬೋಟ್ ಕಾರ್ಮಿಕನಾಗಿದ್ದು ಈತ ಮಂಗಳೂರು ಮೂಲದ ವಿಮಲ ಜನಾರ್ದನ ಎಂಬ ಹೆಸರಿನ ಬೋಟ್ ನಲ್ಲಿ ಪ್ಯಾನ್ ಕ್ಲೀನ್ ಮಾಡುತ್ತಿದ್ದ ವೇಳೆ ಆಯತಪ್ಪಿ ಸಮುದ್ರದಲ್ಲಿ ಬಿದ್ದ ಪರಿಣಾಮ ನೀರಿನಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.