ಹೊನ್ನಾವರ: ಕರ್ಕಿ ಪೆಟ್ರೋಲ್ ಬಂಕ್ ಸಮೀಪ ಲಾರಿ ಹಾಗು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಭಟ್ಕಳ ಕಡೆಯಿಂದ ಕುಮಟಾ ಮಾರ್ಗವಾಗಿ ಚಲಾಯಿಸುತ್ತಿದ್ದ ಲಾರಿ ಹಾಗು ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದ KSRTC ಬಸ್ಸಿಗೆ ಗುದ್ದಿದೆ.
ಲಾರಿ ಚಾಲಕ ಜೋಸ್ ಮಾಥವ್ ಎಂಬಾತನ ನಿರ್ಲಕ್ಷ ಮತ್ತು ಅಜಾಗರೂಕತೆ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ಸಿನ ಚಾಲಕ ರಂಗಪ್ಪ ಮಾದರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಪಘಾತದಲ್ಲಿ ಕುಮಟಾ, ಮುರ್ಡೇಶ್ವರ, ಬೈಂದೂರು ಸೇರಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.