ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ತಾಂಡವ ಕಲಾನಿಕೇತನ ಸಂಸ್ಥೆಯಿAದ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ‘ಕುಮಟಾ ವೈಭವ ಎಂಬ ಸಾಂಸ್ಕೃತಿಕ-ಮನರAಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಂಡವ ಕಲಾನಿಕೇತನದ ಅಧ್ಯಕ್ಷ ಮಂಜುನಾಥ ನಾಯ್ಕ ತಿಳಿಸಿದರು.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಕೊರೊನಾ ಕಾರಣದಿಂದ ಕಳೆದ ವರ್ಷಗಳಲ್ಲಿ ಕುಮಟಾ ವೈಭವ ಕಾರ್ಯಕ್ರಮ ನಡೆಸಲು ಸಾಧ್ಯವಾಗಿರಲಿಲ್ಲ. ಈಗ ಪರಿಸ್ಥಿತಿ ಉತ್ತಮವಾಗಿದ್ದು, 5 ದಿನದ ಕಾರ್ಯಕ್ರಮದಲ್ಲಿ ಸ್ಥಳೀಯ ಕಲೆಗಳಿಗೆ ಪ್ರೋತ್ಸಾಹ ನೀಡುವುದಕ್ಕೆ ಹೆಚ್ಚಿನ ಸಮಯಾವಕಾಶ ನೀಡಲಾಗುತ್ತಿದೆ. ಪ್ರತಿನಿತ್ಯ ಸಂಜೆ 6 ರಿಂದ 8 ಗಂಟೆವರೆಗೆ ಹಾಗೂ ಒಂದು ದಿನ ಸಂಪೂರ್ಣವಾಗಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಲಾಗುವುದು ಎಂದರು.