ಶಿರಸಿ: ತಾಲೂಕಿನ ಬದನಗೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಪಾರ ಮಳೆಯಿಂದಾಗಿ ಭತ್ತ, ಅಡಿಕೆ, ಇನ್ನಿತರ ಬೆಳೆಗಳು ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಯುವರಾಜ ಜೈ ಗೌಡರು ಸಂತೋಳಿ, ಕಾಳಂಗಿ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ವಸಂತ. ಬಿ. ಗೌಡರು ಆಗ್ರಹಿಸಿದ್ದಾರೆ.