ಶಿರಸಿ: ಶಿರಸಿಯಲ್ಲಿ ಬೆಳ್ಳಂಬೆಳಿಗ್ಗೆ ಮಾದಕ ವಸ್ತುಗಳ ಮಾರಾಟ, ಸೇವನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿ, ಗಾಂಜಾ ಪೆಡ್ಲರ್ ಹಾಗೂ ಸೇವನೆ ಮಾಡುವಂತ 15 ಜನರನ್ನು ವಶಕ್ಕೆ ತೆಗೆದುಕೊಂಡು ಮುಂದಿನ ಕಾನೂನು ಪ್ರಕ್ರಿಯೆಗೆ ವೈದ್ಯಕೀಯ ಪರೀಕ್ಷೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಡಿಎಸ್ಪಿ ರವಿ ಡಿ. ನಾಯ್ಕ್, ಸಿಪಿಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ನ್ಯೂ ಮಾರ್ಕೆಟ್ ಪೊಲೀಸ್ ಠಾಣಾ ಪಿಎಸ್ಐ ಭೀಮಾಶಂಕರ್ ಹಾಗೂ ಸಿಬ್ಬಂದಿಗಳು ಭಾಗಿಯಾಗಿದ್ದರು. ಇಲಾಖೆಯ ಈ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕಿ ಡಾ! ಸುಮನ್ ಡಿ ಪೆನ್ನೇಕರ್ ಪ್ರಶಂಸಿದ್ದಾರೆ.