• Slide
    Slide
    Slide
    previous arrow
    next arrow
  • ಅಬಕಾರಿ ಇಲಾಖೆ ಪಿಎಸ್‍ಐ ಹುದ್ದೆ ಕೊಡಿಸುವುದಾಗಿ 3 ಲಕ್ಷ ಪಡೆದು ವಂಚನೆ; ದೂರು ದಾಖಲು

    300x250 AD

    ಶಿರಸಿ: ಅಬಕಾರಿ ಇಲಾಖೆಯಲ್ಲಿ ಪಿಎಸ್‍ಐ ಹುದ್ದೆ ಕೊಡಿಸುತ್ತೇನೆಂದು ನಂಬಿಸಿ 3 ಲಕ್ಷ ರೂಪಾಯಿ ವಂಚಿಸಿರುವ ಕುರಿತು ಬನವಾಸಿ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    300x250 AD


    ತಾಲೂಕಿನ ಕಾಳಂಗಿ ಗ್ರಾಮದ, ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ರುದ್ರೇಶ ಕಲ್ಮಟೇರ ವಂಚನೆಗೊಳಗಾದವರಾಗಿದ್ದು, ಕುಂದಾಪುರ ಮೂಲದ ರಾಘವೇಂದ್ರ ಪೂಜಾರಿ ಎನ್ನುವವರ ಮೇಲೆ ದೂರು ದಾಖಲಾಗಿದೆ. ‘ಅಬಕಾರಿ ಇಲಾಖೆಯಲ್ಲಿ ಪಿಎಸ್‍ಐ ಹುದ್ದೆ ಕೊಡಿಸುತ್ತೇನೆ. ಅದಕ್ಕೆ ಒಟ್ಟು 10 ಲಕ್ಷ ಹಣವನ್ನು ಕೊಡಬೇಕಾಗುತ್ತದೆ. ಮೊದಲು 3 ಲಕ್ಷ ಹಣವನ್ನು ಕೊಡಿ, ನಂತರ ನೇಮಕಾತಿ ಪತ್ರ ಬಂದ ಕೂಡಲೇ ಉಳಿದ ಹಣವನ್ನು ಕೊಡಿ’ ಎಂದು 2018ರಲ್ಲಿ ರಾಘವೇಂದ್ರ ರುದ್ರೇಶ ಅವರಿಗೆ ನಂಬಿಸಿ, ಅವರಿಂದ 2018ರ ನ.14ರಂದು 2 ಲಕ್ಷ ರೂಪಾಯಿ, 15ರಂದು 20 ಸಾವಿರ ರೂಪಾಯಿ, 2019ರ ಜ.23ರಂದು 50 ಸಾವಿರ ರೂಪಾಯಿ ಹಾಗೂ ಮಾ.26ರಂದು 30 ಸಾವಿರ ರೂಪಾಯಿ, ಹೀಗೆ ಒಟ್ಟೂ 3 ಲಕ್ಷ ರೂಪಾಯಿ ಪಡೆದುಕೊಂಡಿದ್ದರ ಬಗ್ಗೆ ದೂರು ದಾಖಲಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top