ಯಲ್ಲಾಪುರ: ತಾಲೂಕಿನ ವಜ್ರಳ್ಳಿಯ ಸುರೇಂದ್ರ(ಸೂರಿ) (29)ರಾಮಯ್ಯ ಶೇರುಗಾರ ಕಳೆದ ವಾರ ನಡೆದ ಆಕಸ್ಮಿಕ ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ತೀವೃ ಗಾಯಗೊಂಡು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ತೀವೃ ನಿಗಾ ಘಟಕದಲ್ಲಿದಾಖಲಿಸಲಾದ್ದು, ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯಲ್ಲಿ ಬುಧವಾರ ಅಸುನೀಗಿದ್ದಾರೆ.
ಸುರೇಂದ್ರರವರು ವೃತ್ತಿಯಲ್ಲಿ ಅಂಚೆ ಇಲಾಖೆಯ ದಾಂಡೇಲಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರವೃತ್ತಿಯಲ್ಲಿ ಉತ್ತಮ ಕ್ರೀಡಾಪಟುವಾಗಿದ್ದರು. ತಂದೆ ರಾಮಯ್ಯ ಶೇರುಗಾರ, ತಾಯಿ ಲಲಿತಾ, ಸಹೋದರನಾದ ನರೇಶ ಮತ್ತು ಅಪಾರ ಗೆಳೆಯರ ಬಳಗವನ್ನು ಸೂರಿ ಅಗಲಿದ್ದಾರೆ. ವಜ್ರಳ್ಳಿಯ ಶೆಳೆಮನೆಯಲ್ಲಿ ಬುಧವಾರ ಸಂಜೆ ನಡೆದ ಮೃತನ ಅಂತ್ಯಕ್ರಿಯೆಯಲ್ಲಿ ಅಪಾರ ಅಭಿಮಾನಿಗಳು, ಊರ ನಾಗರಿಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಅಂತಿಮ ದರ್ಶನ ಮಾಡಿದರು. ಸರ್ಕಾರದ ಪರವಾಗಿ ಸ್ಥಳೀಯ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂತೋಷಿ ಆರ್ ಬಂಟ್ ಭೇಟಿ ನೀಡಿ ಅಂತಿಮ ಗೌರವ ಸಲ್ಲಿಸಿದರು.