ಹಳಿಯಾಳ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಭೀಮಣ್ಣ ನಾಯಕ ಅವರು ನಿಕಟಪೂರ್ವ ವಿಪ ಸದಸ್ಯ ಎಸ್.ಎಲ್. ಘೋಟ್ನೇಕರರನ್ನು ಭೇಟಿ ಮಾಡಿ ಚುನಾವಣೆಯ ಕುರಿತು ಮಾತುಕತೆ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಪಟ್ಟಣದಲ್ಲಿರುವ ಶ್ರೀ ಛತ್ರಪತಿ ವಿವಿಧೋದ್ದೇಶ ಸಹಕಾರಿ ಸಂಘದ ಕಚೇರಿಗೆ ಭೇಟಿ ನೀಡಿದ ಭೀಮಣ್ಣ ನಾಯಕ ಅವರು ಘೋಟೇಕರ ಅವರನ್ನು ಭೇಟಿ ಮಾಡಿ ಹಲವು ಮಹತ್ವದ ವಿಷಯಗಳು ಹಾಗೂ ಚುನಾವಣೆ ಕುರಿತು ಚರ್ಚಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕ ಸತೀಶ ಸೈಲ್, ಮಾಜಿ ಜಿ.ಪಂ.ಸದಸ್ಯ ಕೈತಾನ ಬಾರಬೋಜಾ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ ಚೌಹಾನ ಹಾಗೂ ಇನ್ನಿತರರು ಇದ್ದರು.