ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳ ವಿಧಾನಪರಿಷತ ಚುನಾವಣೆ ಅಂಗವಾಗಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ತಾಲೂಕಿನ ಹುಲೇಕಲ್ ಗ್ರಾಮದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಿ, ಅಭ್ಯರ್ಥಿ ಗಣಪತಿ ಉಳ್ವೇಕರ್ ಅವರ ಪರವಾಗಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಶಿರಸಿ ಗ್ರಾಮೀಣ ಮಂಡಳದ ಅಧ್ಯಕ್ಷ ಎನ್.ವಿ.ಹೆಗಡೆ, ಶಕ್ತಿ ಕೇಂದ್ರದ ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.