Slide
Slide
Slide
previous arrow
next arrow

ಸೈನಿಕರಿಗೆ ಶುಲ್ಕ ರಹಿತ ಕಸಾಪ ಸದಸ್ಯತ್ವ; ಮಹೇಶ ಜೋಶಿ

300x250 AD

ಮೈಸೂರು: ದೇಶದ ಸೈನಿಕರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಯಾವುದೇ ಶುಲ್ಕವಿಲ್ಲದೆ ನೀಡಲಾಗುತ್ತದೆ ಎಂದು ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಭಾನುವಾರ `ಸಿಯಾಚಿನ್’ ಎಂಬ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ ಆಗಿ ಪರಿವರ್ತಿಸುವ ಕನಸನ್ನು ನಾನು ಹೊಂದಿದ್ದೇನೆ. 1 ಕೋಟಿ ಸದಸ್ಯರನ್ನು ಸೇರ್ಪಡೆಗೊಳಿಸುವ ಮೂಲಕ ಎಲ್ಲರನ್ನು ಪರಿಷತ್ತಿನ ಭಾಗವಾಗಿ ಮಾಡುವುದು ನನ್ನ ಗುರಿಯಾಗಿದೆ ಎಂದಿದ್ದಾರೆ.

300x250 AD

ಭಾರತೀಯ ಸೇನೆ, ಅರೆಸೈನಿಕ ಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಗೊಂಡಿರುವ ಕರ್ನಾಟಕದ ಸೈನಿಕರಿಗೆ ಯಾವುದೇ ಶುಲ್ಕವಿಲ್ಲದೆ ಪರಿಷತ್ತಿನ ಸದಸ್ಯತ್ವ ನೀಡಲಾಗುತ್ತದೆ. ನಾನೇ ಸೈನಿಕರ ಮನೆ ಬಾಗಿಲಿಗೆ ತೆರಳಿ ಸದಸ್ಯತ್ವ ಪಡೆಯುವಂತೆ ಕೋರುತ್ತೇನೆ ಎಂದಿದ್ದಾರೆ.

Share This
300x250 AD
300x250 AD
300x250 AD
Back to top