• Slide
    Slide
    Slide
    previous arrow
    next arrow
  • ಕರ್ತವ್ಯಕ್ಕೆ ಹಾಜರಾದ ಕಾನ್ಸಟೇಬಲ್; ನೇಣು ಬಿಗಿದುಕೊಂಡು ಆತ್ಮಹತ್ಯೆ

    300x250 AD


    ಕಾರವಾರ: ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರದಲ್ಲಿ ನಡೆದಿದೆ.


    ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡ ಡಿ.ಆರ್.ಪೊಲೀಸ್ ಕಾನ್ಸಟೇಬಲ್ ಆಗಿದ್ದು, ಕಾರವಾರದ ಡಿ.ಎ.ಆರ್ ಕಚೇರಿಯಲ್ಲಿ ಇಂದು ಕರ್ತವ್ಯಕ್ಕೆ ಹಾಜರಾಗಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ನಾಲ್ಕು ದಿನದ ಹಿಂದೆ ರಜೆಯ ಮೇಲೆ ಹೊನ್ನಾವರ ತಾಲೂಕಿನ ಹಳದಿಪುರಕ್ಕೆ ತೆರಳಿದ್ದರು. ನಂತರ ಇಂದು ಕಚೇರಿಗೆ ಆಗಮಿಸಿ ಕಚೇರಿಯ ಪೊಲೀಸ್ ನೌಕರರ ಸಹಕಾರಿ ಸಂಘದ ಕಚೇರಿಯಲ್ಲಿ ನೇಣಿಗೆ ಶರಣಾಗಿದ್ದಾರೆ.

    300x250 AD


    ಗುರುಪ್ರಸಾದ್ ನಾಯ್ಕ ರವರು ಡಿ.ಎ.ಆರ್ ಪೊಲೀಸ್ ತರಬೇತಿ ಶಾಲೆಯಲ್ಲಿ ಶಿಕ್ಷಕರಾಗಿ ಸಹ ಕಾರ್ಯನಿರ್ವಹಿಸುತ್ತಿದ್ದ ಇವರು ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ಹೆಸರನ್ನು ಗಳಿಸಿದ್ದರು. ಆತ್ಮಹತ್ಯೆಗೆ ಯಾವುದೇ ಕಾರಣ ಈವರೆಗೂ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top