Slide
Slide
Slide
previous arrow
next arrow

ಸೇನಾ ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಗಂಭೀರ

300x250 AD

ಚೆನ್ನೈ: ಸೇನಾಪಡೆಗಳ (ಸಿಡಿಎಸ್) ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯಲ್ಲಿ ಪತನಗೊಂಡಿರುವ ಘಟನೆ ಬುಧವಾರ ನಡೆದಿದೆ.


ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ. ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್, ಅವರ ಸಿಬ್ಬಂದಿಗಳು ಹಾಗೂ ಕುಟುಂಬ ಸದಸ್ಯರು ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ಬಿಪಿನ್ ರಾವತ್ ಸೇರಿದಂತೆ ಮೂವರನ್ನು ರಕ್ಷಿಸಲಾಗಿದ್ದು, ದುರಂತದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದನ್ನು ಇನ್ನಷ್ಟೇ ನಿಖರವಾಗಿ ತಿಳಿದುಬರಬೇಕಾಗಿದೆ.

300x250 AD

ಸೇನಾಪಡೆಗಳು ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ರಕ್ಷಣಾ ಸಿಬಂದಿಗಳು ದೆಹಲಿಯಿಂದ ತಮಿಳುನಾಡಿನ ಸುಲೂರ್ ಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಇಂಡಿಯನ್ ಏರ್ ಫೋರ್ಸ್ ಖಚಿತಪಡಿಸಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಲಾಗಿದೆ. ಗಾಯಗೊಂಡ ಸೇನಾ ಹಿರಿಯ ಅಧಿಕಾರಿಗಳನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮಂಟ್ ಗೆ ಕರೆದೊಯ್ಯಲಾಗಿದೆ ಎಂದು ವರದಿ ತಿಳಿಸಿದೆ.

Share This
300x250 AD
300x250 AD
300x250 AD
Back to top