ಶಿರಸಿ: ದಾಸನಕೊಪ್ಪ ಭಾಗದ ವಿದ್ಯಾರ್ಥಿಗಳು ನಿತ್ಯ ಕಾಲೇಜಿಗೆ ಬರಲು ಕೆಎಸ್ಆರ್ಟಿಸಿ ಬಸ್ ನಿಂದ ತೀವ್ರ ತೊಂದರೆಯಾಗುತ್ತಿದೆ. ಬೆಳಿಗ್ಗೆ 7ರಿಂದ 9 ಗಂಟೆವರೆಗೆ ಹಾವೇರಿ ಹಾನಗಲ್ ಕಡೆಯಿಂದ ಬರುವ ಬಸ್ ಅಲ್ಲಿಂದಲೆ ರಶ್ ಆಗಿ ಬರುತ್ತವೆ ದಾಸನಕೊಪ್ಪ ಭಾಗದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪಾಲಕ ಪರ ಯುವರಾಜ.ಜೆ.ಗೌಡ ಮನವಿ ಮಾಡಿದ್ದಾರೆ.
ಈ ಬಗ್ಗೆ ಬದನಗೊಡ ಗ್ರಾ.ಪಂ. ಗ್ರಾಮ ಸಭೆ ಮತ್ತು ತಾಲೂಕಿನ ಕುಂದುಕೊರತೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಈಗಾಗಲೆ ಕೊವಿಡ ಹೆಚ್ಚಾಗುತ್ತಾ ಇದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಆಗುವ ಸಾಧ್ಯತೆ ಇದೆ. ಸಂಬಂಧಿಸಿದ ಹಿರಿಯ ಕೆಎಸ್ಆರ್ಟಿಸಿ ಅಧಿಕಾರಿಗಳು ಈ ಫೆÇೀಟೊ ನೋಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಒಂದು ವೇಳೆ ಇದೇ ಪರಿಸ್ಥಿತಿ ಮುಂದುವರೆದರೆ ಮಕ್ಕಳ ಪಾಲಕರು ಪ್ರತಿಭಟನೆ ಇಳಿಯಬೇಕಾಗುತ್ತದೆ ಎಂದು ಪಾಲಕರು ಆಗ್ರಹಿಸಿದ್ದಾರೆ.