• Slide
    Slide
    Slide
    previous arrow
    next arrow
  • ಗ್ರಾಮೀಣ ಪ್ರದೇಶಕ್ಕೆ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಬಸ್ ಸಂಚಾರ ಆರಂಭ

    300x250 AD

    ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆಯೂ ವಿವಿಧ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಸಂಚಾರ ಪ್ರಾರಂಭ ಮಾಡಿದೆ.


    ಗುಳ್ಳಾಪುರ, ರಾಮನಗುಳಿ, ಕೊಡ್ಲಗದ್ದೆ, ಅರಬೈಲ್, ಇಡಗುಂದಿ ಮಾರ್ಗವಾಗಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಬಸ್ ಓಡಾಟ ನಡೆಸುತ್ತಿದೆ. ಸೋಮವಾರ ಊರಿಗೆ ಆಗಮಿಸಿದ ಬಸ್ ಅನ್ನು ಗ್ರಾಮದ ಜನ ಪೂಜೆ ಮಾಡಿ ಬರಮಾಡಿಕೊಂಡರು.

    300x250 AD


    ಈ ವೇಳೆ ಪಾಲಕರಾದ ಸುಧಾಕರ ಭಟ್ಟ ಹೆಗ್ಗಾರ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಕಾಳಜಿ ವಹಿಸಿದೆ. ಪ್ರಸ್ತುತ ವಿಶೇಷ ಬಸ್ ಓಡಾಟ ನಡೆಸಿರುವುದರಿಂದ ಮಕ್ಕಳಿಗೆ ಅನುಕೂಲವಾಗಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಗ್ರಾಮದೇವಿ ದೇವಸ್ಥಾನದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ನರಸಿಂಹ ಕೋಣೆಮನೆ ಬಸ್ ಗೆ ಪೂಜೆ ಸಲ್ಲಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top