ಯಲ್ಲಾಪುರ:ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ ವಾದ ಘಟನೆ ಪಟ್ಟಣದ ಜೋಡಕೆರೆ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ
ಮುಂಬೈ ನಿಂದ ಮಂಗಳೂರು ಕಡೆ ರಾಷ್ಟೀಯ ಹೆದ್ದಾರಿ 63 ರ ಮೂಲಕ ಬಸ್ ಸಂಚರಿಸುತಿದ್ದು, 22ಪ್ರಯಾಣಿಕರು ಪ್ರಯಾಣಿಸುತಿದ್ದರು. ಈ ವೇಳೆ ಬಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗಲಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದು, 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿರಬಹುದೆಂದು ಎಂದು ಅಂದಾಜಿಸಲಾಗಿದೆ.