ಬೆಳಗಾವಿ: ಬೆಳಗಾವಿಯಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನೇಕಾರ ಸಮಸ್ಯೆಗಳ ಕುರಿತು ನಡೆದ ಸಭೆಯಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಭಾಗಿಯಾಗಿ, ನೇಕಾರ ಸಮಸ್ಯೆ ಕುರಿತು ಹಾಗೂ ನೇಕಾರರ ಅಭಿವೃದ್ಧಿಗೆ ಸರಕಾರದಿಂದ ಹಮ್ಮಿಕೊಳ್ಳಬಹುದಾದಂತಹ ಯೋಜನೆಗಳ ಬಗ್ಗೆ ಚರ್ಚಿಸಿದರು.
ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ವೀರಣ್ಣ ಚರಂತಿಮಠ, ಅಭಯ ಪಾಟೀಲ ಹಾಗೂ ಸಿದ್ದು ಸವದಿ ಹಾಗೂ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.