ಶಿರಸಿ: ತಾಲೂಕ ಅರಣ್ಯವಾಸಿಗಳ ಸಭೆಯನ್ನು ಅರಣ್ಯ ಅತಿಕ್ರಮಣದಾರರ ಹೋರಾಟಗಾರರ ವೇದಿಕೆ ಕಾರ್ಯಾಲಯ, ಹಳೇ ಆರ್ ಟಿ ಓ ಆಫೀಸ್, ಝೂ ಸರ್ಕಲ್, ಶಿರಸಿ ಯಲ್ಲಿ ಡಿ.20 ಸೋಮವಾರ ಮುಂಜಾನೆ 10 ಗಂಟೆಗೆ ಕರೆಯಲಾಗಿದೆ ಎಂದು ತಾಲೂಕ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಲಕ್ಷ್ಮಣ ಮಾಳ್ಳಕ್ಕನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯವಾಸಿಗಳ ಸಮಸ್ಯೆಗಳನ್ನು ಸರಕಾರದ ಗಮನ ಸೆಳೆಯುವ ದಿಶೆಯಲ್ಲಿ ಬೆಳಗಾಂವ ಅಧಿವೇಶನದ ಡಿಸೆಂಬರ್ 22 ರಂದು ಅರಣ್ಯವಾಸಿಗಳ `ಬೆಳಗಾಂವ ಚಲೋ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಚರ್ಚಿಸುವ ಉದ್ದೇಶದಿಂದ ಕರೆಯಲಾಗಿದ್ದು, ಚರ್ಚೆಯಲ್ಲಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಉಪಸ್ಥಿತರಿರುವರು. ಕಾರಣ ಸದ್ರಿ ಚರ್ಚೆಯಲ್ಲಿ ಆಸಕ್ತ ಅರಣ್ಯ ಅತಿಕ್ರಮಣದಾರರು ಆಗಮಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.