ಭಟ್ಕಳ: ಇಲ್ಲಿನ ಪುರವರ್ಗ ರಾಷ್ಟ್ರೀಯ ಹೆದ್ದಾರಿ 66ರ ಚರ್ಚ್ ಎದುರು ಎರಡು ಜಾನುವಾರುಗಳನ್ನು ಅಕ್ರಮವಾಗಿ ವಾಹನದಲ್ಲಿ ತುಂಬಿಕೊಂಡು ಸಾಗಾಟ ಮಾಡುತ್ತಿರುವ ವೇಳೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಮುಜಾಪರ್ ಹುಸೇನ್ ಹಾಗೂ ಅಬ್ದುಲ್ ರೆಹಮಾನ್ ಬಂಧಿತ ಆರೋಪಿಗಳು. ಇವರು ಯಾವುದೇ ಪಾಸ್ ಅಥವಾ ಪರವಾನಿಗೆ, ದಾಖಲೆ ಇಲ್ಲದೆ ವದೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಎರಡು ಹೋರಿಗಳನ್ನು ಹಿಂಸಾತ್ಮಕವಾಗಿ ಹಾಗೂ ಇಕ್ಕಟ್ಟಾಗಿ ಸಾಗಾಟ ಮಾಡಿಕೊಂಡು ಹೋಗುವ ವೇಳೆ ಪೊಲೀಸರು ದಾಳಿ ಮಾಡಿ ಆರೋಪಿಯ ಬಂಧಿಸಿದ್ದಾರೆ. ಈ ವೇಳೆ ಒಂದು ಹೋರಿ ತಪ್ಪಿಸಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.