• Slide
    Slide
    Slide
    previous arrow
    next arrow
  • ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸಲು ಗ್ರಾಮಸ್ಥರ ಒತ್ತಾಯ

    300x250 AD

    ಹೊನ್ನಾವರ: ಹಳದೀಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪಗಳಿಲ್ಲದೇ ಹಾಗೂ ಅವೈಜ್ಞಾನಿಕ ಕಾಮಗಾರಿಯಿಂದ ಅಪಘಾತ ಹೆಚ್ಚಾಗುತ್ತಿದ್ದು ಕೂಡಲೇ ಸಮರ್ಪಕವಾಗಿ ಕಾಮಗಾರಿ ನಡೆಸಿ ಅವ್ಯವಸ್ಥೆ ಸರಿಪಡಿಸುವಂತೆ ಹಳದಿಪುರ ಗ್ರಾಮಸ್ಥರು ಪಂಚಾಯತ್ ಗೆ ಮನವಿ ಸಲ್ಲಿಸಿದರು.

    ಬಡಗಣಿ ಸೇತುವೆಯಿಂದ ಸಾಲಿಕೆರಿಯವರೆಗೆ ಬೀದಿ ದೀಪಗಳು ಇಲ್ಲದೆ ಇರುವುದರಿಂದ ರಾತ್ರಿಯ ಸಮಯದಲ್ಲಿ ಪಾದಚಾರಿಗಳು ವಾಹನ ಸವಾರರಿಗೆ ಗೋಚರಿಸದೆ ಅಪಘಾತಗಳು ಹೆಚ್ಚಾಗುತ್ತಿದೆ. ಚತುಷ್ಪಥ ರಸ್ತೆ ಕಾಮಗಾರಿ ಪಡೆದ ಐ ಆರ್ ಬಿ ಕಂಪನಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಮಾಡಿದ ಕರಾರಿನ ಪ್ರಕಾರ ಇದರ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಹಳದಿಪುರದ ಬಡಗಣಿಯಿಂದ ಸಾಲಿಕೇರಿಯವರೆಗೆ ದೀಪದ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    300x250 AD

    ಒಂದು ವಾರದ ಗಡುವಿನಲ್ಲಿ ದೀಪದ ವ್ಯವಸ್ಥೆಯ ಕಾಮಗಾರಿ ಸಂಪೂರ್ಣ ಮುಕ್ತಾಯವಾಗದೆ ಇದ್ದಲ್ಲಿ ಹಳದಿಪುರದ ಗ್ರಾಮ ಪಂಚಾಯತ್ ನ ಎಲ್ಲಾ ಪ್ರಜ್ಞಾವಂತ ನಾಗರಿಕರು ಐ. ಆರ್. ಬಿ. ಕಂಪನಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top