• Slide
    Slide
    Slide
    previous arrow
    next arrow
  • ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ; ಏನಿದೆ.? ಏನಿರಲ್ಲ.? ಇಲ್ಲಿದೆ ಮಾಹಿತಿ..

    300x250 AD

    ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಕ್ಕಾಗಿ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಮಾರ್ಗಸೂಚಿಯಂತೆ ಜ.5 ರಿಂದ 19 ರವರೆಗೆ ಎರಡು ವಾರಗಳ ಕಾಲ ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಮುಂದುವರೆಸಲಾಗಿದೆ. ಜೊತೆಗೆ ಹೊಸದಾಗಿ ವಾರಾಂತ್ಯ ಕರ್ಪ್ಯೂವನ್ನು ರಾಜ್ಯಾಧ್ಯಂತ ಜಾರಿಗೊಳಿಸಲಾಗಿದೆ.

    ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಜ.5 ರಿಂದ 19 ರವರೆಗೆ ಜಾರಿಗೆ ಬರುವಂತೆ ಬೆಂಗಳೂರು ಹಾಗೂ ರಾಜ್ಯಾದ್ಯಂತ ಈ ಕೆಳಕಂಡ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

    ಬೆಂಗಳೂರಿಗೆ ಮಾರ್ಗಸೂಚಿ ಕ್ರಮಗಳು:
    * ರಾತ್ರಿ ಕರ್ಪ್ಯೂ 10 ರಿಂದ ರಾತ್ರಿ 5ರವರೆಗೆ ಜಾರಿಯಲ್ಲಿ ಇರಲಿದೆ.
    * ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಸೋಮವಾರದಿಂದ ಶುಕ್ರವಾರದವರೆಗೆ ಕಾರ್ಯ ನಿರ್ವಹಿಸಲು ಅವಕಾಶ
    * ಶೇ.50ರಷ್ಟು ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳು ಕೆಲಸ ಮಾಡೋದಕ್ಕೆ ಅವಕಾಶ
    * ವಾರಾಂತ್ಯ ಕರ್ಪ್ಯೂ ಶುಕ್ರವಾರ ರಾತ್ರಿ 10ರಿಂದ ಪ್ರಾರಂಭಗೊಂಡು ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ.
    * ಬಿಎಂಟಿಸಿ ಬಸ್ ಎಂದಿನಂತೆ ಇರಲಿದೆ.
    * ಬೆಂಗಳೂರು ನಗರದ 10, 11 ಮತ್ತು 12ನೇ ತರಗತಿ ಶಾಲೆಗಳು ಹೊರತುಪಡಿಸಿ, ಎಲ್ಲಾ ಶಾಲಾ-ಕಾಲೇಜುಗಳು ಬಂದ್ ಮಾಡಲು ಸೂಚನೆ.
    * ಪಬ್, ಕ್ಲಬ್, ರೆಸ್ಟೋರೆಂಟ್, ಬಾರ್, ಹೋಟೆಲ್ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಶೇ.50ರಷ್ಟು ಜನರು ಸೇರಲು ಅವಕಾಶ
    * ಸಿನಿಮಾ ಹಾಲ್, ಮಲ್ಟಿಫ್ಲೆಕ್ಸ್, ಥಿಯೇಟರ್, ರಂಗಮಂದಿರ, ಆಡಿಟೋರಿಯಂ ಮತ್ತು ಸಾರ್ವಜನಿಕರು ಸೇರುವ ಪ್ರದೇಶಗಳಲ್ಲಿ ಶೇ.50ರಷ್ಟು ಜನರು ಸೇರಲು ಅನುಮತಿ
    * ಹೊರಾಂಗಣದಲ್ಲಿ ನಡೆಯುವಂತ ಮದುವೆ ಸಮಾರಂಭಗಳಿಗೆ 200 ಜನರಿಗೆ ಅವಕಾಶ. ಒಳಾಂಗಣದಲ್ಲಿ ನಡೆಯುವಂತ ಮದುವೆ ಸಮಾರಂಭಗಳಿಗೆ 100 ಜನರು ಮಾತ್ರವೇ ಸೇರಲು ಅವಕಾಶ
    * ದೇವಸ್ಥಾನ, ಧಾರ್ಮಿಕ ಕೇಂದ್ರಗಳಲ್ಲಿ 50 ಜನರಿಗೆ ಮಾತ್ರ ಅವಕಾಶ
    * ಸ್ವಿಮ್ಮಿಂಗ್ ಪೂಲ್, ಜಿಮ್ ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ
    * ಸ್ಪೋರ್ಟ್ ಕಾಂಬ್ಲೆಕ್ಸ್, ಸ್ಟೇಡಿಯಂಗಳಲ್ಲಿ ಶೇ.50ರಷ್ಟು ಮಿತಿ
    * ಎಲ್ಲಾ ಪ್ರತಿಭಟನಾ ಮೆರವಣಿಗೆ, ಧರಣಿ, ಖಚಿಟಟಥಿಗಳಿಗೆ ನಿಷೇಧ
    * ಕೇರಳ, ಮಹಾರಾಷ್ಟ್ರ ಗಳಿಂದ ಬರೋರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ

    300x250 AD

    ರಾಜ್ಯಾದ್ಯಂತ ವಾರಾಂದ್ಯ ಕರ್ಪ್ಯೂ ಮಾರ್ಗಸೂಚಿ ಕ್ರಮಗಳು:
    * ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳು ತೆರೆದಿರಲು ಅನುಮತಿ. ತುರ್ತು ಸೇವೆ ಕಚೇರಿಗಳು ತೆರೆದಿರಲು ಅವಕಾಶ
    * ಎಲ್ಲಾ ಸಾರ್ವಜನಿಕ ಪಾರ್ಕ್ ಗಳು ಬಂದ್
    * ಐಟಿ ಕಂಪನಿಗಳು ವಾರಾಂತ್ಯ ಕರ್ಪ್ಯೂ ನಡುವೆಯೂ ಕೆಲಸಕ್ಕೆ ಅವಕಾಶ. ನೌಕರರು ಐಡಿ ಕಾರ್ಡ್ ತೋರಿಸಿ ಕಚೇರಿಗೆ ತೆರಳಲು ಅನುಮತಿ
    * ತುರ್ತು ಸಂದರ್ಭದಲ್ಲಿ ಜನರು ತೆರಳಲು ಅವಕಾಶ
    * ಆಹಾರ, ತರಕಾರಿ, ಹಣ್ಣು, ಮಾಂಸ, ಮೀನು, ಡೈರಿ, ಹಾಲಿನ ಬೂತ್ ತೆರೆಯಲು ಅನುಮತಿ
    * ತಳ್ಳುಗಾಡಿಯಲ್ಲಿ ಮಾರಾಟಮಾಡಲು ಅವಕಾಶ
    * ಹೋಂ ಡಿಲಿವರಿಗೆ ಅವಕಾಶ
    * ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಕೊಂಡಯ್ಯಲು ಅನುಮತಿ ನೀಡಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top